ಬೆಂಗಳೂರು: ಕನ್ನಡಿಗರ ಕೂಟ, ದುಬೈ ವತಿಯಿಂದ ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ ಮಾಜಿ ಐಪಿಎಲ್ ಅಧ್ಯಕ್ಷ ಬ್ರಿಜೇಶ್ ಪಟೇಲ್ ಅವರನ್ನು ಬೆಂಗಳೂರಿನಲ್ಲಿರುವ ಅವರ ಕಚೇರಿಯಲ್ಲಿ ಭೇಟಿ ಮಾಡಿ ಸನ್ಮಾನಿಸಲಾಯಿತು.
ಭಾರತೀಯ ಕ್ರಿಕೆಟ್ ಕ್ಷೇತ್ರಕ್ಕೆ ಬ್ರಿಜೇಶ್ ಪಟೇಲ್ ಅವರು ನೀಡಿರುವ ಮಹತ್ವದ ಕೊಡುಗೆಗಳನ್ನು ಗೌರವಿಸಿ ಈ ಸನ್ಮಾನ ನೆರವೇರಿಸಲಾಯಿತು. ಕನ್ನಡಿಗರ ಕೂಟ, ದುಬೈ ಅಧ್ಯಕ್ಷ ಅರುಣ್ ಕುಮಾರ್ ಎಂ.ಕೆ. ಹಾಗೂ ಸಂಯುಕ್ತ ಕಾರ್ಯದರ್ಶಿ ದೀಪಕ್ ಸೋಮಶೇಖರ್ ಅವರು ಸನ್ಮಾನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡಿಗರ ಕೂಟ, ದುಬೈ ವತಿಯಿಂದ ಈ ವರ್ಷ ಆಯೋಜಿಸಲಾಗುತ್ತಿರುವ ಮಹಾ ಕಾರ್ಯಕ್ರಮದ ಕುರಿತು ಚರ್ಚೆ ನಡೆಯಿತು. ಕಾರ್ಯಕ್ರಮಕ್ಕೆ ಸಂಬಂಧಿಸಿದ ಸಿದ್ಧತೆಗಳು ಪೂರ್ಣಗೊಂಡ ಬಳಿಕ ಅದರ ವಿಶೇಷ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
ಈ ಕಾರ್ಯಕ್ರಮದ ಪ್ರಯತ್ನಕ್ಕೆ ಬೆಂಬಲ ನೀಡುತ್ತಿರುವ ಅಕ್ಷಯ್ ಸೇರಿದಂತೆ, ವಿವಿಧ ರೀತಿಯಲ್ಲಿ ಕೈಜೋಡಿಸುತ್ತಿರುವ ಎಲ್ಲರಿಗೂ ಕನ್ನಡಿಗರ ಕೂಟ, ದುಬೈ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.





