ಮೂಲ: ಕಂಪದಕೋಡಿ ವೆದರ್ ರಿಪೋರ್ಟ್ | ಪ್ರಕಟಣೆ: ಸುಧಾವಾಣಿ ವೆದರ್ ಡೆಸ್ಕ್
ಇವತ್ತಿನ ಮುನ್ಸೂಚನೆ ಪ್ರಕಾರ ಕಾಸರಗೋಡು ದ.ಕ ಉಡುಪಿ ಉ.ಕ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಮುಂದುವರೆಯಲಿದ್ದು ಹಗಲು ಅಲ್ಲಲ್ಲಿ ತುಂತುರು ಮಳೆಯಾಗಬಹುದು. ಇವತ್ತು ಉ.ಕ ಉಡುಪಿ ಕರಾವಳಿ ತೀರಪ್ರದೇಶಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ದ.ಕ ಉಡುಪಿ ಜಿಲ್ಲೆಗಳ ಘಟ್ಟಪ್ರದೇಶಗಳ ಸಮೀಪದ ತಾಲ್ಲೂಕುಗಳಲ್ಲಿ ಸಂಜೆ ಸಾಧಾರಣ ಮಳೆಯಾಗಬಹುದು. ಮುಂದಿನ ದಿನಗಳಲ್ಲಿ ಮುಂಗಾರು ಕೊನೆಗೊಳ್ಳುತ್ತಿರುವಾಗ ಹಗಲು ಪಶ್ಚಿಮದ ಮೋಡದಿಂದ ಮಳೆಯಾಗಿ ಸಂಜೆ ಘಟ್ಟಪ್ರದೇಶಗಳಲ್ಲಿ ಪೂರ್ವದ ಗುಡುಗು ಮಳೆ ಅಲ್ಲಲ್ಲಿ ಆರಂಭವಾಗಬಹುದು.
ಮಲೆನಾಡಿನ ಹಾಸನ ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನನಂತರ ಗುಡುಗು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಕೊಡಗು ಜಿಲ್ಲೆಯಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ ಕೋಲಾರ ರಾಮನಗರ ಬೆಂಗಳೂರು - ಗ್ರಾಮಾಂತರ ತುಮಕೂರು ಚಿತ್ರದುರ್ಗ ಬಳ್ಳಾರಿ ಜಿಲ್ಲೆಗಳಲ್ಲಿ ಸಂಜೆ-ರಾತ್ರಿ ಗುಡುಗು ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ ಮೈಸೂರು ಮಂಡ್ಯ ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯಾಗಬಹುದು.
ಉತ್ತರ ಒಳನಾಡಿನ ಕೊಪ್ಪಳ ಗದಗ ಬಾಗಲಕೋಟೆ ಬಿಜಾಪುರ ಕಲ್ಬುರ್ಗಿ ಬೀದರ್ ಜಿಲ್ಲೆಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ರಾಯಚೂರು ಯಾದಗಿರಿ ಹಾವೇರಿ ಧಾರವಾಡ ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗಬಹುದು. ಒಳನಾಡಿನ ಜಿಲ್ಲೆಗಳಲ್ಲಿ 23 ತನಕ ಮಳೆ ಮುಂದುವರೆಯಲಿದೆ.
ಮುಂಗಾರು ಅವಧಿಯಲ್ಲಿ ಬಂಗಾಳಕೊಲ್ಲಿಯ ಮೇಲ್ಮೈ ಸುಳಿಗಾಳಿಗಳ ಕಾರಣದಿಂದ ಪಶ್ಚಿಮ ಮತ್ತು ಪೂರ್ವ ದಿಕ್ಕಿನಿಂದ ಮೋಡ ಗಾಳಿ ರಾಜ್ಯಕ್ಕೆ ಬರುತ್ತಿದ್ದು ಒಳನಾಡು ಜಿಲ್ಲೆಗಳಲ್ಲಿ ಉತ್ತಮ ಮಳೆ ಮುಂದುವರೆಯಲಿದೆ. ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ನಿರೀಕ್ಷೆಗಿಂತ ಕಡಿಮೆ ಮಳೆಯಾಗಬಹುದು.