ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
ರಾಜಕೀಯ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಜನಾರ್ದನ ಪೂಜಾರಿ ಅವರು ಸದಾ ಜನಪರ ಚಿಂತನೆಗಳೊಂದಿಗೆ ಕಾರ್ಯನಿರ್ವಹಿಸಿರುವ ನಾಯಕರು ಎಂದು ಡಿಸಿಎಂ ಶ್ಲಾಘಿಸಿದರು.
ಪೂಜಾರಿ ಅವರೊಂದಿಗೆ ಕೆಲಕಾಲ ಆತ್ಮೀಯ ಮಾತುಕತೆ ನಡೆಸಿದ ಡಿ.ಕೆ. ಶಿವಕುಮಾರ್, ಅವರ ಆಶೀರ್ವಾದ ಪಡೆದು ಸಂತಸ ವ್ಯಕ್ತಪಡಿಸಿದರು.
ಈ ಭೇಟಿಯು ರಾಜಕೀಯ ಹಾಗೂ ಸಾಮಾಜಿಕ ವಲಯಗಳಲ್ಲಿ ಗಮನ ಸೆಳೆದಿದೆ.






