ಚಿಕ್ಕಮಂಗಳೂರು: ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣವಾದ ಚಿಕ್ಕಮಂಗಳೂರಿನ ಮಾಣಿಕ್ಯಧಾರ ಜಲಪಾತ ಬಳಿ ಬಾಲಕಿ ನಾಪತ್ತೆ ಮತ್ತು ಸಾವನ್ನಪಿದ ದುರ್ಘಟನೆ ನಡೆದಿದೆ.
ಕುಟುಂಬ ಸಮೇತ ಪ್ರವಾಸಕ್ಕೆ ಬಂದಿದ್ದ ಕೇರಳದ ಪಾಲಕ್ಕಾಡ್ ಮೂಲದ 10ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಶ್ರೀನಂದ ಕಾಣೆಯಾಗಿದ್ದ ಪ್ರಕರಣದಲ್ಲಿ ಶುಕ್ರವಾರ ದುಃಖಕರ ಅಂತ್ಯ ಕಂಡಿದೆ. ಚಂದ್ರದ್ರೋಣ ಬೆಟ್ಟಗಳ ಸಮೀಪ ಆಕೆಯ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಸಂಜೆ ಸುಮಾರು 5:30ರ ವೇಳೆಗೆ ಕುಟುಂಬದೊಂದಿಗೆ ಜಲಪಾತದ ಬಳಿ ಇದ್ದ ವಿದ್ಯಾರ್ಥಿನಿ ಆಕಸ್ಮಿಕವಾಗಿ ಕಾಣೆಯಾಗಿದ್ದರು. ರಾತ್ರಿ 8ರ ಸುಮಾರಿಗೆ ಕುಟುಂಬದವರು ಹುಡುಕಾಟ ನಡೆಸಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ತಕ್ಷಣವೇ ಶೋಧ ಕಾರ್ಯಾಚರಣೆ ಆರಂಭಿಸಿದರು. ದಟ್ಟ ಕಾಡು ಪ್ರದೇಶವಾಗಿದ್ದರಿಂದ ಥರ್ಮಲ್ ಡ್ರೋನ್ಗಳನ್ನು ಬಳಸಿ ಶೋಧ ಕಾರ್ಯ ನಡೆಸಲಾಯಿತು. ಸುಮಾರು 40 ಮಂದಿ ಸಂಬಂಧಿಕರ ಗುಂಪಿನೊಂದಿಗೆ ಬಂದಿದ್ದ ವಿದ್ಯಾರ್ಥಿನಿ ಈ ದುರ್ಘಟನೆಯ ಬಲಿಯಾಗಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸಾವಿನ ನಿಖರ ಕಾರಣ ತಿಳಿಯಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರವಾಸಿ ತಾಣಗಳಲ್ಲಿ ತೆರಳುವ ವ್ಯಕ್ತಿಗಳು ಅತೀ ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಪ್ರವಾಸ ಕೈಗೊಳ್ಳುವುದು ತುಂಬಾ ಅತ್ಯಾವಶ್ಯಕ.





