21 July 2026 |

ಸುರತ್ಕಲ್‌ನಲ್ಲಿ ಸಹೋದರನ ಹತ್ಯೆ; ಅಣ್ಣ ಪೊಲೀಸ್ ವಶಕ್ಕೆ

  • 20 Jul 2026 04:37:27 PM

ಮಂಗಳೂರು: ಸುರತ್ಕಲ್ ಸಮೀಪದ ಚೊಕ್ಕಬೆಟ್ಟಿನಲ್ಲಿ ಭಾನುವಾರ ತಡರಾತ್ರಿ ನಡೆದ ಘಟನೆದಲ್ಲಿ, ಮಲಗಿದ್ದ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿರುವ ಆರೋಪದ ಮೇಲೆ ಅಣ್ಣನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತೆಗ್ಯಾಳು ಮೂಲದ ಮಲ್ಲಿಕಾರ್ಜುನ (20) ಮೃತ ಯುವಕ. ಆರೋಪಿ ಸೋಮನಾಥ್ (21) ಹಾಗೂ ಮೃತರು ಚೊಕ್ಕಬೆಟ್ಟಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಘಟನೆ ನಡೆದ ವೇಳೆ ಇಬ್ಬರು ಮಾತ್ರ ಮನೆಯಲ್ಲಿದ್ದರು ಎಂದು ತಿಳಿದುಬಂದಿದೆ.

 

ಸೋಮವಾರ ಬೆಳಗ್ಗೆ ಮಲ್ಲಿಕಾರ್ಜುನ ರಕ್ತದ ಮಡುವಿನಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಶ್ವಾನದಳ, ಬೆರಳಚ್ಚು ಹಾಗೂ ವಿಧಿವಿಜ್ಞಾನ ತಜ್ಞರ ತಂಡವೂ ಸ್ಥಳ ಪರಿಶೀಲನೆ ನಡೆಸಿದೆ.