08 June 2025 | Join group

ಸುಹಾಸ್ ಶೆಟ್ಟಿ ಪರಿವಾರಕ್ಕೆ 25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ - ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ

  • 02 May 2025 08:04:42 PM

ಮಂಗಳೂರು, ಮೇ 02 : ನಿನ್ನೆ ಮಂಗಳೂರಿನ ಬಜ್ಪೆಯಲ್ಲಿ ಬರ್ಬರವಾಗಿ ಹ*ತ್ಯೆಯಾದ ಸುಹಾಸ್ ಶೆಟ್ಟಿ ಅಂತಿಮ ದರ್ಶನದಲ್ಲಿ ಭಾಗವಹಿಸಿದ ನಂತರ ವಿಜಯೇಂದ್ರ ಮಾತನಾಡಿ " ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಪಕ್ಷದ ಪರವಾಗಿ 25 ಲಕ್ಷ ಪರಿಹಾರ ನೀಡುವ ತೀರ್ಮಾನ ಮಾಡಿದ್ದೇವೆ. ಮುಖ್ಯಮಂತ್ರಿ, ಗೃಹಸಚಿವರು ಘಟನೆಯ ಗಂಭೀರತೆ ಅರ್ಥ ಮಾಡಿಕೊಳ್ಳಬೇಕು. ಸರ್ಕಾರದಿಂದ ಪರಿಹಾರ ನೀಡಬೇಕು. ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ನಡೆಸಬೇಕು" ಎಂದು ಆಗ್ರಹಿಸಿದರು.

 

'ಕಾಶ್ಮೀರ ಪಹಲ್ಗಾಮ್ ಹ*ತ್ಯೆ ಮರೆಯುವ ಮೊದಲೇ ಈ ಘಟನೆ ನಡೆದಿರುವುದು ಖಂಡನಾರ್ಹ. ಬಿಜೆಪಿ ಈ ಘಟನೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಪೊಲೀಸ್ ಇಲಾಖೆ ವೈಫಲ್ಯ ಮೇಲ್ನೋಟಕ್ಕೆ ಕಂಡು ಬರ್ತಿದೆ. ಜೀವಕ್ಕೆ ರಕ್ಷಣೆ ನೀಡದಿರುವುದು ಪೊಲೀಸರ ವೈಫಲ್ಯ' ಎಂದು ಹೇಳಿದ್ದಾರೆ.

 

'ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿ ಕುಟುಂಬಕ್ಕೆ ಧೈರ್ಯ ಹೇಳುವ ಪ್ರಯತ್ನ ಮಾಡಿದ್ದೇವೆ. ಬಿಜೆಪಿಯ ಮುಖಂಡರು, ಕಾರ್ಯಕರ್ತರು ಅವರ ಕುಟುಂಬದ ಜೊತೆ ಇದ್ದೇವೆ ಎಂದು ಈ ಕ್ಷಣದಲ್ಲಿ ಹೇಳ ಬಯಸುತ್ತೇನೆ. ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ. ಕುಟುಂಬದ ಆಧಾರ ಸ್ತಂಬ ಕಳಚಿ ಬಿದ್ದಂತಾಗಿದೆ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.