ಮಂಗಳೂರು, ಮೇ 02 : ಮಂಗಳೂರಿನಲ್ಲಿ ಮೀನು ವ್ಯಾಪಾರಿಯೊಬ್ಬರನ್ನು ಅಟ್ಟಾಡಿಸಿ ಕೊ*ಲೆಗೆ ಯತ್ನಿಸಿದ ಪ್ರಕರಣ ಕನ್ನಡದ ಪ್ರತಿಷ್ಠಿತ ಮಾದ್ಯಮದಲ್ಲಿ ಪ್ರಕಟಣೆಯಾಗಿದೆ. ವ್ಯಕ್ತಿ ಮೀನು ಮಾರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಉಳ್ಳಾಲ ನಿವಾಸಿ ಲುಕ್ಮಾನ್ ಹಲ್ಲೆಗೊಳಗಾದ ಮೀನು ವ್ಯಾಪಾರಿ ಎಂದು ವರದಿಯಾಗಿದೆ. ವ್ಯಕ್ತಿಯೊಬ್ಬರಿಗೆ ಮೀನು ನೀಡಲು ರಸ್ತೆಯಲ್ಲಿ ಕಾಯುತಿದ್ದಾಗ ಇನ್ನೊವಾ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಯುವಕನನ್ನು ಅಟ್ಟಾಡಿಸಿ, ಕಲ್ಲು ಎತ್ತಿ ಹಾಕಿ ಕೊ*ಲೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.
ಯುವಕನ ಅದೃಷ್ಟ ಚೆನ್ನಾಗಿ ಇದ್ದುದರಿಂದ ಪಕ್ಕದಲ್ಲಿದ್ದ ಹಿಂದೂ ಮಹಿಳೆಯ ಸಮಯಪ್ರಜ್ಞೆಯಿಂದ ಪ್ರಾಣ ಉಳಿದಿದೆ ಎಂದು ಹೇಳಲಾಗಿದೆ. ಹಿಂದೂ ಮಹಿಳೆಯೊಬ್ಬಳು ಈ ದೃಶವನ್ನು ನೋಡಿ ಭಯದಿಂದ ಬೊಬ್ಬೆ ಹಾಕಿದ್ದರ ಪರಿಣಾಮ, ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಗಾಯಾಳು ಲುಕ್ಮಾನ್ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಮತ್ತು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. ಹೆಚ್ಚಿನ ವಿವರ ಲಭ್ಯವಾಗಬೇಕಾಗಿದೆ.