ವಿಟ್ಲ: ಅಡ್ಯನಡ್ಕ ಸಮೀಪದ ಮನಿಮುಂಡ ಪ್ರದೇಶದಲ್ಲಿ ನಡೆದ ದುರ್ಘಟನೆಯಲ್ಲಿ ಕಾಲು ಜಾರಿ ಕೆರೆಗೆ ಬಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತಪಟ್ಟವರು ದಿನೇಶ್ ನಾಯ್ಕ (32) ಎಂದು ಗುರುತಿಸಲಾಗಿದೆ. ಅವರು ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.
ದಿನೇಶ್ ಅವರ ನಿಧನದಿಂದ ಪತ್ನಿ ಹಾಗೂ ತಂದೆ-ತಾಯಿ ದುಃಖದಲ್ಲಿ ಮುಳುಗಿದ್ದಾರೆ. ಘಟನೆಯ ಮಾಹಿತಿ ತಿಳಿದ ವಿಟ್ಲ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.





