ಮಂಗಳೂರು, ಮೇ 03 : ಇಲ್ಲಿನ ಬಜ್ಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊ*ಲೆಯ ಹಂತಕರನ್ನು ಹಿಡಿಯಲು ಪೊಲೀಸರು ಬಲೆ ಬೀಸಿದ್ದು ಈಗಾಗಲೇ ಇಬ್ಬರ ಬಂಧನ ಆಗಿದೆ ಎಂದು ತಿಳಿದು ಬಂದಿದೆ. ಕರಾವಳಿ ಪ್ರದೇಶವನ್ನು ಬೆಚ್ಚಿ ಬೀಳಿಸಿದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊ*ಲೆಗಡುಕರನ್ನು ಹುಡುಕಲು ಪೊಲೀಸರು 4 ತಂಡಗಳನ್ನು ರಚಿಸಿದ್ದರು.
ಪ್ರಾಥಮಿಕ ವರದಿಗಳ ಪ್ರಕಾರ, ಚಿಕ್ಕಮಂಗಳೂರು ಜಿಲ್ಲೆಯ ಕಳಸ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ನಟೋರಿಸ್ ಸಫ್ವಾನ್ ಗ್ಯಾಂಗ್ ಗೆ ಈ ಇಬ್ಬರು ಕೆಲಸ ಮಾಡುತ್ತಿದ್ದರಂತೆ. ಈ ಇಬ್ಬರು ಯುವಕರು ಹಿಂದೂ ಸಮುದಾಯಕ್ಕೆ ಸೇರಿದವರು ಎಂದು ಹೇಳಲಾಗಿದೆ.
ಕೆಲ ಮಾಧ್ಯಮಗಳಲ್ಲಿ ವರದಿಯಾದ ಪ್ರಕಾರ ಒಟ್ಟು 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ ಎಂದು ಹೇಳಲಾಗಿದೆ ಆದರೆ ಅಧಿಕೃತವಾಗಿ ಪೊಲೀಸರಿಂದ ಯಾವುದೇ ವಿವರಗಳು ಎಲ್ಲಿಯವರೆಗೆ ಬಂದಿರುವುದಿಲ್ಲ.