ಚಿಕ್ಕಮಂಗಳೂರು, ಮೇ 03: ಮಂಗಳೂರಿನ ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಹ*ತ್ಯೆ ಪ್ರಕರಣದಲ್ಲಿ ಒಟ್ಟು 8 ಕೊ*ಲೆಗಾರರ ಪೈಕಿ ಚಿಕ್ಕಮಂಗಳೂರಿನ ಇಬ್ಬರು ಪಾಲ್ಗೊಂಡಿದ್ದಾರೆ ಎಂದು ವರದಿಯಾದ ಬೆನ್ನಲ್ಲೇ ಚಿಕ್ಕಮಂಗಳೂರಿನ ಕೆಲವಡೆ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ.
ಚಿಕ್ಕಮಂಗಳೂರು ಜಿಲ್ಲೆಯ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದ್ದು, ವಾಹನ ತಪಾಸಣೆ ಕೂಡ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಆಗಮಿಸುವ ವಾಹನಗಳನ್ನು ಬಣಕಲ್ ಠಾಣೆಯ ಪೊಲೀಸರು ತೀವ್ರಗೊಳಿಸಿದ್ದಾರೆ.
ಕೊಟ್ಟೆಹಾರ ಚೆಕ್ ಪೋಸ್ಟಿನಲ್ಲಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸುತ್ತಿದ್ದಾರೆ.
ರಾಜ್ಯದ ಗ್ರಹಮಂತ್ರಿ ಜಿ. ಪರಮೇಶ್ವರ್ ಈಗಾಗಲೇ ಮಂಗಳೂರಿನಲ್ಲಿ ಬೀಡುಬಿಟ್ಟಿದ್ದು ಅಧಿಕಾರಿಗಳ ಜೊತೆ ಮೀಟಿಂಗ್ ನಡೆಸುತ್ತಿದ್ದಾರೆ ಮತ್ತು ಮಾಹಿತಿ ಕಲೆ ಹಾಕುತ್ತಿದ್ದಾರೆ.