ಮಂಗಳೂರು, ಮೇ 04: ಮಂಗಳೂರಿನ ಬಜ್ಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಹ*ತ್ಯೆ ಪ್ರಕರಣವನ್ನು ಎನ್ಐಎ ಗೆ ಹಸ್ತಾಂತರಿಸಬೇಕೆಂದು ಬಿಜೆಪಿ ಮುಖಂಡರು ರಾಜ್ಯ ಸರಕಾರಕ್ಕೆ ಒತ್ತಾಯಿಸಿದ್ದರು. ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪತ್ರಿಕಾಗೋಷ್ಠಿ ನಡೆಸಿ ಸರಕಾರಕ್ಕೆ ಒತ್ತಾಯಿಸಿದ್ದರು.
ಆದರೆ, ಕರ್ನಾಟಕದ ಗೃಹ ಮಂತ್ರಿ ಮಾಧ್ಯಮಗಳ ಜೊತೆ ಮಾತನಾಡಿ " ಸುಹಾಸ್ ಕೊ*ಲೆ ಪ್ರಕರಣವನ್ನು NIA ಗೆ ಒಪ್ಪಿಸಲ್ಲ, ನಮ್ಮ ರಾಜ್ಯದ ಪೊಲೀಸ್ ಇಲಾಖೆ ಸಶಕ್ತರಾಗಿದ್ದು NIA ತನಿಖೆ ಅವಶ್ಯಕತೆ ಇಲ್ಲ" ಎಂದು ತಿಳಿಸಿದ್ದಾರೆ. ಈಗಾಗಲೇ ನಮ್ಮ ಪೊಲೀಸ್ ತಂಡ 8 ಜನರನ್ನು ಬಂಧಿಸಿದ್ದು, ಮುಂದಿನ ತನಿಖೆ ನಡೆಸುತಿದ್ದಾರೆ ಎಂದು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬೃಜೇಶ್ ಚೌಟ ಕೂಡ ಕೇಂದ್ರ ಗೃಹ ಸಚಿವ ಅಮಿತ್ ಷಾ ರವರಿಗೆ ಪತ್ರ ಬರೆದು ಈ ಕೇಸ್ ನ್ನು NIA ಗೆ ಒಪ್ಪಿಸಬೇಕೆಂದು ಒತ್ತಾಯ ಮಾಡಿದ್ದಾರೆ.
ಸುಹಾಸ್ ಹ*ತ್ಯೆಯ ನಂತರ ಈಗ ಕರಾವಳಿಯ ಮತ್ತಷ್ಟು ಹಿಂದೂ ನಾಯಕರುಗಳ ಹ*ತ್ಯೆ ಮಾಡುವುದಾಗಿ ಬೆದರಿಕೆಯ ಪೋಸ್ಟ್ ಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಸೈಬರ್ ಸೆಲ್ ಏನು ಮಾಡುತ್ತಿದೆ ಎಂದು ಜನ ಕಳವಳ ವ್ಯಕ್ತಪಡಿಸುತ್ತಿದ್ದಾರೆ.