27 August 2026 |

ಸೌಜನ್ಯಾ ನಿವಾಸಕ್ಕೆ ಡಾ. ಪ್ರಭಾಕರ ಭಟ್ ಕಲ್ಲಡ್ಕ ಭೇಟಿ

  • 26 Aug 2026 07:30:10 PM

ಬೆಳ್ತಂಗಡಿ: 13 ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿದ್ದ ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅವರ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಕ್ಕೆ ಆರ್‌ಎಸ್‌ಎಸ್‌ನ ಹಿರಿಯ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಆಗಸ್ಟ್ 26ರಂದು ಭೇಟಿ ನೀಡಿದರು.

 

ಈ ವೇಳೆ ಸೌಜನ್ಯ ಅವರ ತಾಯಿ ಕುಸುಮಾವತಿ ಚಂದಪ್ಪ ಗೌಡ ಅವರೊಂದಿಗೆ ಡಾ. ಪ್ರಭಾಕರ ಭಟ್ ಅವರು ಮಾತುಕತೆ ನಡೆಸಿದರು. 

 

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.