29 August 2026 |

ನೇಪಾಳ ಪ್ರವಾಹ: 17 ಕನ್ನಡಿಗರ ಪತ್ತೆಗೆ ಕಾರ್ಯಾಚರಣೆ

  • 28 Aug 2026 10:58:37 AM

ಕಠ್ಮಂಡು: ನೇಪಾಳದಲ್ಲಿ ಉಂಟಾದ ಭಾರೀ ಪ್ರವಾಹದ ಪರಿಣಾಮ 17 ಮಂದಿ ಕನ್ನಡಿಗರು ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. 

 

ನಾಪತ್ತೆಯಾದವರ ಕುರಿತು ಮಾಹಿತಿ ಕಲೆಹಾಕುವ ಜೊತೆಗೆ, ಅವರನ್ನು ಸುರಕ್ಷಿತವಾಗಿ ಪತ್ತೆಹಚ್ಚಲು ಕರ್ನಾಟಕದ ಅಧಿಕಾರಿಗಳು ನೇಪಾಳದ ಸಂಬಂಧಿತ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

 

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಇತರ ಕನ್ನಡಿಗರ ವಿವರಗಳನ್ನೂ ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. 

 

ರಕ್ಷಣಾ ಕಾರ್ಯಾಚರಣೆ ಹಾಗೂ ಅಗತ್ಯ ಪರಿಹಾರ ನೆರವು ಒದಗಿಸುವ ನಿಟ್ಟಿನಲ್ಲಿ ಎರಡೂ ದೇಶಗಳ ಅಧಿಕಾರಿಗಳ ನಡುವೆ ಸಮನ್ವಯ ಮುಂದುವರಿದಿದೆ.