17 September 2026 |

ಮಂಗಳೂರಿನಲ್ಲಿ ನಾಳೆ ಸಂಪುಟ ಸಭೆ; ಪ್ರಮುಖ ರಸ್ತೆಗಳಲ್ಲಿ ಸಂಚಾರ ಬದಲಾವಣೆ

  • 17 Sep 2026 02:14:44 PM

ಮಂಗಳೂರು: ಕರ್ನಾಟಕ ಸರ್ಕಾರದ ಸಂಪುಟ ಸಭೆ ಸೆಪ್ಟೆಂಬರ್ 18ರಂದು ಮಂಗಳೂರಿನ ಪಡೀಲ್‌ನಲ್ಲಿರುವ ಪ್ರಜಾಸೌಧದಲ್ಲಿ ನಡೆಯಲಿದೆ. ಮುಖ್ಯಮಂತ್ರಿ, ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ನಗರದ ಕೆಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ.

 

ಸಭೆಯ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಚಿವರು ಹಾಗೂ ಗಣ್ಯರ ಸಂಚಾರದ ಸಮಯದಲ್ಲಿ ಕೆಲವು ರಸ್ತೆಗಳಲ್ಲಿ ವಾಹನಗಳ ಓಡಾಟಕ್ಕೆ ನಿರ್ಬಂಧ ಅಥವಾ ಮಾರ್ಗ ಬದಲಾವಣೆ ಇರುವ ಸಾಧ್ಯತೆಯಿದೆ. 

 

ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಹಾಗೂ ಸಂಚಾರ ಪೊಲೀಸರ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.

 

ಸಂಪುಟ ಸಭೆಗೆ ಸಂಬಂಧಿಸಿದಂತೆ ನಗರದ ಪ್ರಮುಖ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದ್ದು, ಸಂಚಾರ ಸುಗಮವಾಗಿರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.