07 June 2025 | Join group

ಬಿ.ಸಿ ರೋಡ್ ಬಳಿ ಭೀಕರ ಅಪಘಾತ : ಖಾಸಗಿ ಸಿಸಿ ಬಸ್ ಕಾರಿಗೆ ಡಿಕ್ಕಿ, ಚಾಲಕ ಗಂಭೀರ.

  • 05 Mar 2025 06:00:19 PM

ಬಂಟ್ವಾಳ, ಮಾರ್ಚ್ 05, 2025 : ಮಂಗಳೂರು ಬೆಂಗಳೂರು ಹೆದ್ದಾರಿಯ ಬಿ.ಸಿ ರೋಡ್ ಬಳಿ ಭೀಕರ ಅಪಘಾತ ಮಾರ್ಚ್ 5 ರಂದು ನಡೆದಿದೆ. ಖಾಸಗಿ ಸಿಸಿ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ.

 

ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಬಿ ಸಿ ರೋಡಿನ ಸರ್ಕಲ್ ಬಳಿ ಈ ಘಟನೆ ನಡೆದಿದೆ. ಗಾಯಾಳುವನ್ನು ಕೇರಳ ಮೂಲದ ವಿಶ್ವನಾಥ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು  ಬಿ ಸಿ ರೋಡ್ ಕಡೆಯಿಂದ ಮೆಲ್ಕಾರ್ ಗೆ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ, ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. 

 

 

ಕಾರು ಸಂಪೂರ್ಣ ಜಖಂಗೊಂಡಿದ್ದು, ಬಸ್ ನ ಎದುರು ಭಾಗಕ್ಕೆ ಹಾನಿಯಾಗಿದೆ. ಗಂಭೀರ ಗಾಯಗೊಂಡಿದ್ದ ಕಾರು ಚಾಲಕರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಸ್ ಡ್ರೈವರ್ ನ ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತನಿಖೆಯ ನಂತರ ತಿಳಿದು ಬರಬೇಕಾಗಿದೆ.