ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇತ್ತೀಚಿಗೆ ಕಾನೂನು ಸುವ್ಯವಸ್ಥೆಯ ಬಗ್ಗೆ ಬಹಳಷ್ಟು ಬೆಳವಣಿಗೆಗಳು ನಡೆಯುತ್ತಿದೆ. ಕೆಲ ತಿಂಗಳ ಹಿಂದೆ ಉಡುಪಿ ಪೊಲೀಸ್ ಕಮಿಷನರ್ ಆಗಿದ್ದ ಸುಧೀರ್ ಕುಮಾರ್ ರೆಡ್ಡಿಯವರನ್ನು ಕಾನೂನು ಸುವ್ಯವಸ್ಥೆಯನ್ನು ಬಲಪಡಿಸಲು ಮಂಗಳೂರಿಗೆ ಕರೆತರಿಸಲಾಗಿತ್ತು.
ಅದಾದ ನಂತರ ಕೋಮು ನಿಗ್ರಹ ದಳ (ಕಮ್ಯುನಲ್ ಟಾಸ್ಕ್ ಫೋರ್ಸ್) ರಚನೆ ಮಾಡುವುದರ ಮೂಲಕ ಉಡುಪಿ, ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಡೆಯುವ ಕೋಮು ಸಂಘರ್ಷವನ್ನು ನಿಯಂತ್ರಣಗೊಳಿಸುವ ಸಲುವಾಗಿ ಈ ತಂಡವನ್ನು ಜಾರಿಗೆ ತರಲಾಯಿತು.
ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿಗಳನ್ನು ಕೂಡ ವರ್ಗಾವಣೆ ಮಾಡಲಾಗಿದ್ದು, ಹೊಸ ಜಿಲ್ಲಾಧಿಕಾರಿಗಳನ್ನು ಕೂಡ ನೇಮಕ ಮಾಡಲಾಯಿತು.
ಇದೀಗ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯವರು 56 ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಿದ್ದಾರೆ. ಬಹಳಷ್ಟು ಕಾಲ ಒಂದೇ ಸ್ಟೇಷನ್ನಲ್ಲಿ ಕೆಲಸ ಮಾಡುತ್ತಿದ್ದ ಹೆಚ್ಚಿನ ಪೊಲೀಸರು ಈ ವರ್ಗಾವಣೆಯಲ್ಲಿ ಒಳಗೊಂಡಿದ್ದಾರೆ. ಪ್ರಮುಖವೆಂದರೆ ಸುಹಾಸ್ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಆರೋಪಿಸಿದಂತೆ ಬಜಪೆ ಪೊಲೀಸ್ ಠಾಣಾ ಸಿಬ್ಬಂದಿ ರಶೀದ್ ಎಂಬವರನ್ನು ಕೂಡ ವರ್ಗಾವಣೆ ಮಾಡಲಾಗಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಭಾಸ್ ಶೆಟ್ಟಿ ಅವರ ಹ*ತ್ಯೆ ಪ್ರಕರಣದ ನಂತರ ಕೋಮು ಗಲಭೆಗಳಿಗೆ ಸಂಬಂಧಪಟ್ಟಂತೆ ಬಹಳಷ್ಟು ಬೆಳವಣಿಗೆಗಳನ್ನು ಕಾಣಬಹುದಾಗಿದೆ.