ಮೂಲ: ಕಂಪದಕೋಡಿ ವೆದರ್ ರಿಪೋರ್ಟ್ | ಪ್ರಕಟಣೆ: Sudhavani Weather Desk
ಕರಾವಳಿ ಜಿಲ್ಲೆಗಳಲ್ಲಿ ನಿನ್ನೆ ಉತ್ತಮ ಬಿಸಿಲಿನ ವಾತಾವರಣ ಇತ್ತು. ಕಾಸರಗೋಡು ದ.ಕ ಉಡುಪಿಯ ಒಂದೆರಡು ಪ್ರದೇಶಗಳಲ್ಲಿ ಸಾಮಾನ್ಯ ಮಳೆಯಾಗಿದೆ.
ಇವತ್ತಿನ ಮುನ್ಸೂಚನೆ ಪ್ರಕಾರ ಕಾಸರಗೋಡು ಮತ್ತು ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ/ಬಿಸಿಲು ಮುಂದುವರಿಯಲಿದೆ. ಮಳೆ ಕಡಿಮೆಯಾದ ಕಾರಣ ಮುಂಜಾನೆ ಮಂಜು ಮತ್ತು ತಂಪುಹವೆ ಆರಂಭವಾಗಿದ್ದು ಮಧ್ಯಾಹ್ನ ನಂತರ ದ.ಕ. ದ ಸುಳ್ಯ ಬೆಳ್ತಂಗಡಿ ತಾ. ಗಳ ಒಂದೆರಡು ಕಡೆಗಳಲ್ಲಿ ಸಣ್ಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಪ್ರದೇಶಗಳಲ್ಲಿ ಬಹುತೇಕ ಒಣಹವೆ ಮುಂದುವರೆಯಬಹುದು.. ದೊಡ್ಡ ಮಳೆಯ ಮುನ್ಸೂಚನೆ ಇಲ್ಲ.
ಮಲೆನಾಡಿನ ಕೊಡಗು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ತುಂತುರು ಮಳೆಯ ಸಾಧ್ಯತೆ ಇರಲಿದ್ದು ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಮುಂದುವರೆಯಲಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ತಮಿಳುನಾಡು ಗಡಿಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಮೈಸೂರು ಮಂಡ್ಯ ರಾಮನಗರ ಬೆಂಗಳೂರು - ಗ್ರಾಮಾಂತರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯಾಗಬಹುದು. ಕೋಲಾರ ತುಮಕೂರು ಬಳ್ಳಾರಿ ಜಿಲ್ಲೆಗಳ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬಿಜಾಪುರ ಕಲ್ಬುರ್ಗಿ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಸಾಮಾನ್ಯ ಮಳೆ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಭಾಗಷಃ ಮೋಡದ ವಾತಾವರಣ ಮುಂದುವರೆಯಬಹುದು. ಆಂಧ್ರ ಸಮೀಪದ ಮೇಲ್ಮೈ ಸುಳಿಗಾಳಿ ಕಾರಣದಿಂದ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ರಾಜ್ಯದಲ್ಲಿ ಮುಂಗಾರು ದುರ್ಬಲ ಆಗಿದ್ದು ಗುಜರಾತ್ ಸಮೀಪದ ಲೋ ಪ್ರೆಷರ್ ಮತ್ತು ಶ್ರೀಲಂಕಾ ಸಮೀಪದ ಮೇಲ್ಮೈ ಸುಳಿಗಾಳಿ ಕಾರಣದಿಂದ ಗಾಳಿಯು ಉತ್ತರಕ್ಕೆ ಮತ್ತು ದಕ್ಷಿಣಕ್ಕೆ ಬೀಸುತ್ತಿದ್ದು ತಮಿಳುನಾಡು ಮೂಲಕ ದಕ್ಷಿಣ ಒಳನಾಡಿಗೆ ಮೋಡ ಬರುತ್ತಿದೆ. ಆಂಧ್ರ ಸಮೀಪದ ಮೇಲ್ಮೈ ಸುಳಿಗಾಳಿ ಕಾರಣದಿಂದ ಆಂಧ್ರ ಗಡಿಭಾಗದ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಒಂದು ವಾರ ಗುಡುಗು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಸೆ 13/14 ರಿಂದ ಅಲ್ಲಲ್ಲಿ ಗುಡುಗು ಮಳೆ ಆರಂಭ ಆಗಬಹುದು.