ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆದಿತ್ತು. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಿದೆ ಧಾರವಾಡ ಬೆಳಗಾವಿ ಜಿಲ್ಲೆಗಳಲ್ಲಿ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಿತ್ತು.
ಇವತ್ತಿನ ಮುನ್ಸೂಚನೆ ಪ್ರಕಾರ ಕಾಸರಗೋಡು ದ.ಕ ಉಡುಪಿ ಉ.ಕ ಜಿಲ್ಲೆಗಳಲ್ಲಿ ಬೆಳಿಗ್ಗೆ ಅಲ್ಲಲ್ಲಿ ಮೋಡ ಬರಲಿದ್ದು ನಂತರ ಬಿಸಿಲಿನ ವಾತಾವರಣ ಮುಂದುವರೆಯಲಿದೆ. ಕಾಸರಗೋಡು ಜಿಲ್ಲೆಯ ಗಡಿಪ್ರದೇಶಗಳಲ್ಲಿ ಉ.ಕ. ದ ಘಟ್ಟಪ್ರದೇಶಗಳಲ್ಲಿ ತುಂತುರು - ಸಣ್ಣ ಮಳೆಯ ಮುನ್ಸೂಚನೆ ಇದೆ.ಆದರೇ ವಾತಾವರಣದಲ್ಲಿ ತೇವಾoಶ ಕಡಿಮೆ ಇದ್ದರೇ ತಂಪುಹವೆ ಮುಂದುವರೆಯಬಹುದು. ನಾಳೆಯಿಂದ ಮೋಡ ಬರಲಿದ್ದು ಸೆ 15ಕ್ಕೆ ಎಲ್ಲಾ ಪ್ರದೇಶಗಳಲ್ಲಿ ಒಂದೆರಡು ಸಾಮಾನ್ಯ ಮಳೆ ಮುನ್ಸೂಚನೆ ಇದೆ. ಸೆ 16 ರಿಂದ 19 ತನಕ ಅಲ್ಲಲ್ಲಿ ಮಳೆ ಮುಂದುವರೆಯಬಹುದು.
ಮಲೆನಾಡಿನ ಕೊಡಗು ಹಾಸನ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಸಾಮಾನ್ಯ ಮಳೆ ಮುನ್ಸೂಚನೆ ಇದೆ. ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಹುತೇಕ ಮೋಡದ ವಾತಾವರಣ ಮುಂದುವರೆಯಲಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ ಮೈಸೂರು ಮಂಡ್ಯ ಚಿತ್ರದುರ್ಗ ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು - ಗ್ರಾಮಾಂತರ ಚಿಕ್ಕಬಳ್ಳಾಪುರ ತುಮಕೂರು ದಾವಣಗೆರೆ ಜಿಲ್ಲೆಗಳ ಕೆಲವೆಡೆ 1-2mm ತುಂತುರು ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡಿನ ಬೆಳಗಾವಿ ಧಾರವಾಡ ಗದಗ ಬಾಗಲಕೋಟೆ ಬಿಜಾಪುರ ಕಲ್ಬುರ್ಗಿ ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಯಾದಗಿರಿ ರಾಯಚೂರು ಕೊಪ್ಪಳ ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಲೋ ಪ್ರೆಷರ್ ಕಾರಣದಿಂದ ಮಧ್ಯಭಾರತ ಮಹಾರಾಷ್ಟ್ರದಲ್ಲಿ ಉತ್ತಮ ಮಳೆ ಮುಂದುವರಿಯಲಿದೆ.ಇದರಿಂದಾಗಿ ಭಾರತದ ಪಶ್ಚಿಮ ಕರಾವಳಿಯಲ್ಲಿ 3-4 ದಿನ ಸಾಮಾನ್ಯ ಮಳೆಯಾಗಬಹುದು.ಸೆ 21ರ ನಂತರ ಇನ್ನೊಮ್ಮೆ ಬಂಗಾಳಕೊಲ್ಲಿಯಲ್ಲಿ ವಾಯುಭಾರಕುಸಿತ ಆಗುವ ಸಾಧ್ಯತೆ ಇದೆ.