ಬಾಳ್ತಿಲ : ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಪೂಜಾರಿ ಚೆಂಡೆ ಅವರು ಅಧಿಕೃತವಾಗಿ ನೇಮಕಗೊಂಡಿದ್ದಾರೆ. ಹಿಂದಿನ ಅಧ್ಯಕ್ಷರ ನಿಧನದ ನಂತರ ತೆರವಾಗಿದ್ದ ಅಧ್ಯಕ್ಷ ಪಟ್ಟ ಮಾರ್ಚ್ 26,02025 ರಂದು ಎಲ್ಲಾ ವಾರ್ಡಿನ ಸದಸ್ಯರುಗಳ ಒಮ್ಮತದ ಮೇರೆಗೆ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಪ್ರಸ್ತುತ ಅಧ್ಯಕರಾಗಿ ನೇಮಕಗೊಂಡ ಚಂದ್ರಶೇಖರ ಪೂಜಾರಿ ಚೆಂಡೆ ಇವರು ಶ್ರೀ ಸಾರ್ವಜನಿಕ ಗಣೇಶೋತ್ಸವ ಸೇವಾ ಸಮಿತಿ, ನೀರಪಾದೆ ಇದರ ಮಾಜಿ ಅಧ್ಯಕ್ಷರಾಗಿ, ಶ್ರೀ ಕುಂದಾಯ ರಕ್ತೇಶ್ವರಿ ಮಹಮ್ಮಾಯಿ ಸೇವಾ ಸಮಿತಿ ಸಣ್ಣಕುಕ್ಕು ಮತ್ತು ಚೆಂಡೆ ಫ್ರೆಂಡ್ಸ್ , ಚೆಂಡೆ, ಇದರ ಸದಸ್ಯರಾಗಿ ಕಾರ್ಯ ನಿರ್ವಹಿಸಿರುತ್ತಾರೆ.
ಇದರ ಜೊತೆಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ನೀರಪಾದೆ ಇದರ ಜೀರ್ಣೋದ್ದಾರ ಸಮಿತಿಯ ಜೊತೆ ಕಾರ್ಯದರ್ಶಿಯಾಗಿದ್ದಾರೆ.
ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಬಾಳ್ತಿಲ ಪಂಚಾಯತಿನ ಮಾಜಿ ಅಧ್ಯಕ್ಷರು, ಪ್ರಸ್ತುತ ಸದಸ್ಯರುಗಳು, ಶಕ್ತಿ ಕೇಂದ್ರ ಪದಾಧಿಕಾರಿಗಳು, ಪಂಚಾಯತ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹಾಗೂ ಇನ್ನಿತರರು ಉಪಸ್ಥಿತರಿದ್ದರು.